ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ-

ಮಹಾಂತೇಶ್ ಬೀಳಗಿ

ದಾವಣಗೆರೆ ಜ. 22
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ
ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್
ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು
ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ
ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ
ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ
ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ
ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು
ನಿರ್ಧರಿಸಲಾಗಿದೆ. ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ
ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು.
ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ
ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ
ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು. ನೌಕರರ
ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ,
ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ
ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು.
ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್
ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ
ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ
ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ
ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್
ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ
ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು
ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ.

ಹಾಗೂ ಜಿಲ್ಲಾ ಪಂಚಾಯತ್‍ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ.
ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು
ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ
ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ
ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು
ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು
ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.
ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ,
ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ
ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ
ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು
ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು,
ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ
ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು
ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ
ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ
ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ
ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ
ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು
ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್
ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್‍ಬಾಲ್ ಮತ್ತಿತರೆ
ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ
ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್
ಬ್ಯಾಡ್ಮಿಂಟನ್- ಎಸ್‍ಎಸ್ ಬಡಾವಣೆಯ ನೇತಾಜಿ ಸುಭಾಷ್‍ಚಂದ್ರಬೋಸ್ ಒಳಾಂಗಣ
ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್
ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ
ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ
ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ
ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ
ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ
ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-
ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು
ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *