ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ
ಎಂ.ಪಿ.ರೇಣುಕಾಚಾರ್ಯರವರು ಮೇ 28 ರಂದು ಜಿಲ್ಲಾ ಪ್ರವಾಸ
ಕೈಗೊಳ್ಳಲಿದ್ದಾರೆ.
ಮೇ 28 ರ ಶುಕ್ರವಾರ ಬೆಳಿಗ್ಗೆ 10.30 ರಿಂದ ಸಂಜೆ 7
ಗಂಟೆವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ
ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗಳು ಮತ್ತು
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19
ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ
ವೀಕ್ಷಣೆ ಹಾಗೂ ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು
ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ
ಬಗ್ಗೆ/ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರ ವಿಶೇಷ
ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *