ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ
ಬಸವರಾಜ ಇವರು  ಜುಲೈ -2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ
ಪ್ರವಾಸ ಕೈಗೊಳ್ಳಲಿದ್ದಾರೆ.
ಜು.01 ರಂದು ಸಂಜೆ.04 ಕ್ಕೆ ಬೆಂಗಳೂರಿನಿಂದ ಹೊರಟು ರಾ.8 ಕ್ಕೆ
ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಜುಲೈ 02ರ ಬೆಳಿಗ್ಗೆ
10.30ಕ್ಕೆ ದಾವಣಗೆರೆಯಿಂದ ಹೊರಟು ಹರಪನಹಳ್ಳಿಗೆ ತಲುಪುವರು.
ಜು.03 ರ ಭಾನುವಾರ ದಂದು  ಬೆಳಿಗ್ಗೆ 10 ರಿಂದ ಮ.12
ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ  
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ
ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ
ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ
ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು
ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *