ಶಿವಮೊಗ್ಗ: ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು.

ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ ಹಸಿವಿನಿಂದ ಇರಬಾರದು ಎಂಬ ಕಾಳಜಿಯಿಂದ ಕಾರ್ಯಕ್ರಮವನ್ನು ಪ್ರತಿ ತಿಂಗಳು ಮಾಡಿಕೊಂಡು ಬರಲಾಗುತ್ತಿದೆ. ಅನಾಥಾಶ್ರಮವೊಂದು ಮುಚ್ಚಿಹೋದ ಹಿನ್ನೆಲೆಯಲ್ಲಿ ಹೊಸದಾಗಿ ಟ್ರಸ್ಟ್ ರಚನೆಯಾಗಿದೆ. ಹೆಣ್ಣು ಮಕ್ಕಳಿಗಾಗಿ ಮಾಡಿರುವ ಟ್ರಸ್ಟ್ನಲ್ಲಿರುವವರಿಗೆ ಆಹಾರದ ಕಿಟ್ ವಿತರಿಸಲಾಯಿತು.

ನಮ್ಮ ಜೆಸಿಐ ಶಿವಮೊಗ್ಗ ಭಾವನಾ ಘಟಕವು ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ನಲ್ಲಿ ಇರುವವರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದ್ದು, ನಮ್ಮ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನಿಲ್ ತಿಳಿಸಿದರು.

ಸಭೆಯಲ್ಲಿ ಜೆಸಿಐ ನಿರ್ದೇಶಕಿ ಶಾರದಾ ಶೇಷಗಿರಿ ಗೌಡ, ಉಪಾಧ್ಯಕ್ಷೆ ಕರಿಬಸಮ್ಮ, ಸದಸ್ಯೆ ಸ್ಮಿತಾ, ಜೆಸಿಐ ಶಿವಮೊಗ್ಗ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.