ನ್ಯಾಮತಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಚ್ ಬಿ ಮಂಜಪ್ಪ ಇವರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಳಂಗ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಂದ ಒತ್ತಾಯ.
ಸೌಳಂಗ ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಇಂದು ಸುದ್ದಿಗೋಷ್ಠಿಯಲ್ಲಿ ಚಿನ್ನಿಕಟ್ಟೆ ಜೋಗ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೇತನ್ ನಂತರ ಮಾತನಾಡಿದ ಅವರು ವಿಧಾನ ಪರಿಷತ್ತಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಎಚ್ ಬಿ ಮಂಜಪ್ಪನವರನ್ನು ಆಯ್ಕೆ ಮಾಡಬೇಕು. ಸುಮಾರು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಾಗೂ 2019ರಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸುಮಾರು 65,000 ಸಾವಿರ ಮತಗಳ ಅಂತರದಿಂದ ಸೋಲನ್ನು ಅನುಭವಿಸಿ, ಜಿಲ್ಲೆಯಲ್ಲಿ ಕುರುಬ ಸಮುದಾಯದ ಪ್ರಬಲ ನಾಯಕನಾಗಿ ಬೆಳೆದು, ಮೇ 7ರಂದು ನಡೆದ ಲೋಕಸಭಾ ಅಭ್ಯರ್ಥಿ ಪ್ರಭ ಮಲ್ಲಿಕಾರ್ಜುನ್ ಅವರ ಪರವಾಗಿ ಸಂಘಟನೆ ಮಾಡಿ ಪಕ್ಷದ ಗೆಲುವಿಗಾಗಿ ದುಡಿದಿದ್ದಾರೆ. ನ್ಯಾಮತಿ ತಾಲೂಕಿನ ಸವಳಂಗ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಮತ್ತು ಜಾತ್ಯತೀತವಾಗಿ ಅವರನ್ನ ವಿಧಾನಪರಿಷತಗೆ ಆಯ್ಕೆ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಾಗರಾಜ್, ಬಸವರಾಜಪ್ಪ, ಗಂಗಪ್ಪ, ಮಂಜು, ಕೃಷ್ಣಪ್ಪ, ರಂಗಪ್ಪ, ರಾಜು ಕೊಡುತಾಳ್, ನಾಗರಾಜ್, ಅಣ್ಣಪ್ಪ ನಾಯ್ಕ, ದಿನೇಶನಾಯ್ಕ, ಸುರೇಶ ಸಿ ಬಿ, ಸೌಳಂಗ ಕಾಂಗ್ರೆಸ್ ಯುವ ಮುಖಂಡ ಗಿರೀಶ್ ಮತ್ತುಪಕ್ಷದ ಕಾರ್ಯಕರ್ತರು ಮುಖಂಡರುಗಳು ಸಹ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *