ನ್ಯಾಮತಿ: ರಾಜ್ಯ ಸರ್ಕಾರಿ ನೌಕರರ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.
ಪಟ್ಟಣದಲ್ಲಿಗುರುವಾರಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿತಾಲ್ಲೂಕುಘಟಕದ ವತಿಯಿಂದಗುರುವಾರ 7ನೇ ವೇತನ ವರದಿ ಅನುಷ್ಠಾನ ಒಳಗೊಂಡಂತೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕರರ ಸಂಘದ ಪದಾಧಿಕಾರಿಗಳು ಕೊಟ್ಟ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಉಪವಿಭಾಗಾಧಿಕಾರಿಅಭಿಷೇಕ ಬಿ.ನಾಯ್ಕ, ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹಾಗೂ
ರಾಜ್ಯ ಸರ್ಕಾರಿ ನೌಕರರ ಸಂಘದತಾಲ್ಲೂಕುಘಟಕದಅಧ್ಯಕ್ಷಎಸ್.ಸಂತೋಷ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಜಿಲ್ಲಾಘಟಕದಅಧ್ಯಕ್ಷಡಿ.ರಾಮಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದಅಧ್ಯಕ್ಷ ಬಿ.ಎಚ್.ಆಂಜನೇಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಅಧ್ಯಕ್ಷೆ ಎಂ.ಸುಧಾ, ಆರ್‍ಡಿಪಿಆರ್‍ಅಧ್ಯಕ್ಷ ಜಿ.ಬಿ.ವಿಜಯಕುಮಾರ ಹಾಗೂ ನೌಕರರ ಸಂಘದಎಲ್ಲಾ ಪದಾಧಿಕಾರಿಗಳು, ನಿರ್ದೇಶಕರುಗಳು, ವೃತ್ತಿಪರ ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರುಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *