ದಾವಣಗೆರೆ; ಜು.19: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
   ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, 2 ಕೆ.ಜಿ.ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
   ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೆÇೀರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ದಾವಣಗೆರೆ ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *