ದಾವಣಗೆರೆ,ಆಗಸ್ಟ್.5 ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಆಗಸ್ಟ್ 8 ರಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ವ್ಯಸನ ಮುಕ್ತ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನಿಗಳಿಗೆ ವ್ಯಸನದಿಂದ ಹೊರ ಬರಲು ವೈದ್ಯರು ಮತ್ತು ನುರಿತ ಕೌನ್ಸಿಲರ್‌ಗಳಿಂದ ಚಿಕಿತ್ಸೆ ಮತ್ತು ಸಲಹೆಯನ್ನು ನೀಡಲಾಗುತ್ತದೆ. ವ್ಯಸನಿಗಳ ತೀವ್ರತೆಯನ್ನು ಆಧರಿಸಿ ಚಿಕಿತ್ಸಾ ಸಲಹೆ ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 8 ರಂದು ಬೆಳಗ್ಗೆ 9.30 ಕ್ಕೆ ಗಾಂಧಿ ಭವನಕ್ಕೆ ಆಗಮಿಸಿ ನೊಂದಣಿ ಮಾಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ.ಬಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *