ದಾವಣಗೆರೆ ಜನವರಿ 8 : ಜಿಲ್ಲಾಡಳಿತ ವತಿಯಿಂದ ಜನವರಿ-26 ರಂದು ಆಚರಿಸಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪೂರ್ವ ಸಿದ್ದತೆ ಹಾಗೂ ಕಾರ್ಯಕ್ರಮಗಳ ರೂಪುರೇಷಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ತಿಳಿಸಿದ್ದಾರೆ.
