ದಾವಣಗೆರೆ ಜನವರಿ 8 : ಪ್ರಸಕ್ತ ಸಾಲಿನಲ್ಲಿ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಸ್ಥಳೀಯ ಲೇಖಕರು ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯ ಜೊತೆಗೆ ಒಂದು ಪುಸ್ತಕವನ್ನು ಲಗತ್ತಿಸಬೇಕು. ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ 16 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಎಸ್ ನಿಜಲಿಂಗಪ್ಪ ಬಡಾವಣೆ ಎಸ್ ಎಲ್ ಪಿ ಯು ಕಾಲೇಜ್ ಹಿಂಬಾಗ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆAದು ಉಪನಿರ್ದೇಶಕರು ತಿಳಿಸಿದ್ದಾರೆ.
